Latest News

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.

ಬ್ಲಾಗ್ ಆರ್ಕೈವ್

ಪಾಲಂದಿರ ಐನ್ ಮನೆಯಲ್ಲಿ 11ನೇ ಪುಸ್ತಕ ಪತ್ತಾಯ ಕಾರ್ಯಕ್ರಮ

 

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ ಪ್ರಾಯೋಜನೆಯಲ್ಲಿ 11ನೇ ಕೊಡವ 'ಪುಸ್ತಕ ಪತ್ತಾಯ' ಕಾರ್ಯಕ್ರಮವು ಇತ್ತೀಚೆಗೆ ಬಲಂಬೇರಿಯಲ್ಲಿರುವ ಪಾಲಂದಿರ ಐನ್ ಮನೆಯಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕೊಡವ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಕಾರ್ಯನಿಮಿತ ಬೆಂಗಳೂರಿನಲ್ಲಿದ್ದ ಕಾರಣ, ಅವರ ಪರವಾಗಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಾಸಕರ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಶಾಸಕರ ಪರವಾಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಕೊಡವ ಸಾಹಿತ್ಯದ ಬೆಳವಣಿಗೆಗೆ ಶಾಸಕರು ಸದಾ ಬೆಂಬಲ ನೀಡಲಿದ್ದಾರೆ ಎಂಬ ಸಂದೇಶವನ್ನು ನೆರೆದಿದ್ದ ಸಭಿಕರಿಗೆ ತಿಳಿಸಿದರು.

ಕೊಡವ ಸಾಹಿತ್ಯ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ದಾಟಿಸುವಲ್ಲಿ ಅಕಾಡೆಮಿಯ ಇಂತಹ ಪುಸ್ತಕ ಪತ್ತಾಯ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಗಣ್ಯರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ರಂಗನ್ನು ಹೆಚ್ಚಿಸಿದರು. ಇವರೊಂದಿಗೆ ಪಾಲಂದಿರ ಕುಟುಂಬದ ಪಟ್ಟೆದಾರರಾದ ನಂಜಪ್ಪ, ಪಾಲಂದಿರ ಕುಟುಂಬಸ್ಥರು, ಕೊಡವ ಸಾಹಿತ್ಯ ಅಕಾಡೆಮಿಯ ವಿವಿಧ ಸದಸ್ಯರು ಹಾಗೂ ಸ್ಥಳೀಯ ಪ್ರಮುಖ ಮುಖಂಡರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ನವ ಪೀಳಿಗೆಗೆ ಕೊಡವ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ಸಮಾರಂಭವು ಸಾಕ್ಷಿಯಾಯಿತು.


Read in English: www.kodaguexpress.com